ಜಿಟಿಡಿ ಹೇಳಿಕೆ ಖಂಡಿಸಿ ಪ್ರತಿಭಟನೆ

admin
1 Min Read


ಪಬ್ಲಿಕ್‌ ಅಲರ್ಟ್‌
ವರದಿ : ಎಂಪಿ ರಾಕೇಶ್
ಮೈಸೂರು: ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ಅವಕಾಶ ನೀಡಿದರೆ ಸಹಕಾರ ಸಂಘಗಳ ಬಾಗಿಲು ಮುಚ್ಚಬೇಕಾಗುತ್ತದೆ ಎಂಬ ಶಾಸಕ ಜಿ.ಟಿ.ದೇವೇಗೌಡರ ಹೇಳಿಕೆ ಖಂಡಿಸಿ ಕರ್ನಾಟಕ ಭೀಮ್ ಸೇನೆ ವತಿಯಿಂದ ಗಾಂಧಿನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಧಿವೇಶನದಲ್ಲಿ ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ನಾಮ ನಿರ್ದೇಶಿತ ಸದಸ್ಯರ ನೇಮಕ ಮತ್ತು ರೋಸ್ಟರ್ ಪದ್ಧತಿಯಲ್ಲಿ ಅಧಿಕಾರ ಹಂಚಿಕೆ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಸಚಿವ  ಹೆಚ್.ಕೆ.ಪಾಟೀಲ್ ಮಂಡಿಸಿದ್ದರು. ಈ ವೇಳೆ ಶಾಸಕ ಜಿ.ಟಿ.ದೇವೇಗೌಡ ಅವರು ವಿರೋಧ ವ್ಯಕ್ತಪಡಿಸಿ ದಲಿತರನ್ನು ಅವಮಾನಿಸಿದ್ದಾರೆ. ಇವರ ಈ ದುರಹಂಕಾರದ ನಡವಳಿಕೆಯನ್ನು ಇಡೀ ದಲಿತ ಸಮೂಹ ಖಂಡಿಸುತ್ತದೆ ಎಂದು ಕಿಡಿ ಕಾರಿದರು.
ಇವರ ಹೇಳಿಕೆ ಅವರ ನಡವಳಿಕೆಯನ್ನು ಪುಷ್ಟೀಕರಿಸುವಂತಿದೆ. ಜಿ.ಟಿ.ದೇವೇಗೌಡ ಮತ್ತು ಇವರ ಅಳಿಯ ನಡೆಸಿರುವ ಭೂ ಹಗರಣಗಳ ಬಗ್ಗೆ ಈಗಾಗಲೇ ಜನರಿಗೆ ಗೊತ್ತಿದೆ. ಇಂತಹ ಕ್ರಿಮಿನಲ್ ಕೇಸ್ ಹೊಂದಿರುವ ಇವರು ದಲಿತರ ಬಗ್ಗೆ ಇಷ್ಟೊಂದು ಹಗುರವಾಗಿ ಮಾತನಾಡಿರುವುದು ಖಂಡನೀಯ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದು ಕೊಂಡಿರುವುದರಿಂದ ಇವರ ಸದಸ್ಯತ್ವವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಮಂಜುನಾಥ್, ಮುಖಂಡರಾದ ನಾಗಣ್ಣ, ಶರತ್, ಮೋಹನ್, ಜ್ಯೋತಿ, ವಿಜಯ್, ಕಿರಣ್, ಭೀಮಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

Share This Article
Leave a Comment