ಪಬ್ಲಿಕ್ ಅಲರ್ಟ್
ಮೈಸೂರು: ಗ್ರಾಮಾಂತರ ಪ್ರದೇಶ ಸೇರಿದಂತೆ ಇಡೀ ದೇಶದಲ್ಲಿ ಸಹಕಾರ ಕ್ಷೇತ್ರ ಉತ್ತಮವಾಗಿ ಬೆಳೆದರೆ ಎಲ್ಲರಿಗೂ ಸಮಾನತೆ, ಆರ್ಥಿಕ ಪ್ರಗತಿಗೆ ದಾರಿಯಾಗಲಿದೆ. ಸಹಕಾರ ಕ್ಷೇತ್ರ ಸ್ವಾಯತ್ತತೆಯಿಂದ ಕೆಲಸ ಮಾಡಿದಷ್ಟು ಅಭಿವೃದ್ಧಿ ಕಂಡು ನೂರಾರುಜನರಿಗೆ ನೆರವಾಗಲು ಕಾರಣವಾಗಲಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಬೋಗಾದಿ ರಿಂಗ್ ರಸ್ತೆಯ ಜಿ.ಎಲ್.ಎನ್.ಕನ್ವೆನ್ಷನ್ ಹಾಲ್ನಲ್ಲಿ ಆಯೋಜಸಿದ್ದ ಶ್ರೀ ಶಾರದ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವ ಸಮಾರಂಭದಲ್ಲಿ ಸ್ಮರಣ ಸಂಚಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ೨೫ ವರ್ಷಗಳಲ್ಲಿ ಎರಡೂವರೆ ಸಾವಿರ ಸದಸ್ಯರನ್ನು ನೋಂದಾಯಿಸಿ ಆದಾಯ ಮತ್ತು ಪ್ರಗತಿ ಸಾಧಿಸಿರುವುದು ಶ್ಲಾಘನೀಯ. ನಿರ್ದೇಶಕರು ಬ್ಯಾಂಕಿನ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಿದ್ದರಿಂದಾಗಿ ಸಂಘ ಎತ್ತರಕ್ಕೆ ಬೆಳೆಯಲು ಸಾಧ್ಯವಾಗಿದೆ ಎಂದರು. ಸ್ವಾತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ಸಹಕಾರ ಕ್ಷೇತ್ರ ಸ್ವಾಯತ್ತತೆ,ಸ್ವಾವಲಂಬಿಯಾಗಿ ಕೆಲಸ ಮಾಡುತ್ತಿದೆ.ಸಹಕಾರ ಕ್ಷೇತ್ರದ ಬ್ಯಾಂಕ್,ಸಂಘಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಜನರಿಗೆ ಸಾಲಸೌಲಭ್ಯ ನೀಡಲು ಅನುಕೂಲವಾಗಲಿದೆ ಎಂದರು. ಸರ್ಕಾರಿ ಬ್ಯಾಂಕ್ಗಳಿಂದ ತರಕಾರಿ, ಹಣ್ಣು ವ್ಯಾಪಾರ ಮಾಡುವವರು, ಗುಡಿ ಕೈಗಾರಿಕೆಗಳನ್ನು ಮಾಡುವವರಿಗೆ ಸಾಲ ಸೌಲಭ್ಯ ನೀಡುವುದಿಲ್ಲ. ನನ್ನ ಬ್ಯಾಂಕ್, ಬ್ಯಾಂಕ್ನ ರಜತ ಮಹೋತ್ಸವವೆಂದು ಭಾವಿಸಿ ಬಂದಿರುವುದು ಸಂತೋಷವಾಗಿದೆ. ಸಹಕಾರ ಕ್ಷೇತ್ರದಲ್ಲಿ ಮಾಡಿಕೊಂಡು ಬಂದಿರುವ ಕೆಲಸ, ಅನುಭವವನ್ನು ನೋಡಿದರೆ ಸಹಕಾರ ಕ್ಷೇತ್ರ ರಾಜಕೀಯ ಮತ್ತುಸರ್ಕಾರದ ಹಸ್ತಕ್ಷೇಪದಿಂದ ದೂರವಿರಬೇಕು ಎಂದರು. ಅಧ್ಯಕ್ಷತೆಯನ್ನು ಶ್ರೀಶಾರದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿ.ವೆಂಕಟೇಶ್ ವಹಿಸಿದ್ದರು. ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಎಚ್.ವಿ.ರಾಜೀವ್, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಎ.ಎಸ್.ಚಂದ್ರಶೇಖರ್, ಉಪಾಧ್ಯಕ್ಷ ಕೆ.ವೆಂಕಟಕೃಷ್ಣ ಭಟ್, ನಿರ್ದೇಶಕರಾದ ಎಸ್.ವೆಂಕಟೇಶ್, ಟಿ.ಎನ್.ರಾಮದಾಸ್, ಎಂ.ಮಹೇಂದ್ರ,ಜೆ.ಎಸ್.ಗೋಪಾಲಕೃಷ್ಣ, ಕೆ.ಆರ್.ನಟರಾಜು, ಎಚ್.ಎಸ್.ಲಲಿತಾ ನಾಗರಾಜ್, ವೈ.ಕೆ.ರೇವತಿ, ಎಂ.ಆರ್.ಯೋಗೀಶ್, ಎಂ.ಗೋಪಾಲ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಜಿ.ಕೃಷ್ಣಮೂರ್ತಿ ಹಾಜರಿದ್ದರು.
