ಪಬ್ಲಿಕ್ ಅಲರ್ಟ್
ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದವತಿಯಿಂದ ಮೈಸೂರಿನಲ್ಲಿ ಜಿಲ್ಲೆಯಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಡಾ.ಜಿ.ಲಕ್ಷ್ಮಿಕಾಂತರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಎಸ್.ಯುಕೇಶ್ ಕುಮಾರ್ ಖುದ್ದಾಗಿ ಸಮೀಕ್ಷಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ವರುಣಾ ವಿಧಾನ ಸಭಾ ಕ್ಷೇತ್ರದ ವಾಜಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಜಮಂಗಲ ಭುಗತಹಳ್ಳಿ ಸೇರಿ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯವನ್ನು ಪರಿಶೀಲಿಸಿದ ಅವರು, ಗಣತಿದಾರರು ಮನೆ-ಮನೆಗೆ ತೆರಳಿ ಮಾಹಿತಿಯನ್ನು ನಿಖರವಾಗಿ ದಾಖಲಿಸುತ್ತಿರುವುದನ್ನು ಗಮನಿಸಿದರು.
ಸಮೀಕ್ಷೆಯ ವೇಳೆ ಎದುರಾಗುವ ಸಮಸ್ಯೆಗಳ ಕುರಿತು ಗಣತಿದಾರರೊಂದಿಗೆ ಚರ್ಚಿಸಿ, ಸಮೀಕ್ಷಾ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕೆಂದು ನಿರ್ದೇಶಿಸಿದರು.



ಈ ಸಂದರ್ಭದಲ್ಲಿ ಮೈಸೂರು ತಹಶೀಲ್ದಾರ್ ಮಹೇಶ್, ಮೈಸೂರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ಮೈಸೂರು ಗ್ರಾಮಾಂತರ ಬಿಇಓ ಪ್ರಕಾಶ್ ಇನ್ನಿತರರು ಉಪಸ್ಥಿತರಿದ್ದರು.
