ಪಬ್ಲಿಕ್ ಅಲರ್ಟ್
ಮೈಸೂರು: ಕೇಂದ್ರ ರೇಷ್ಮೆ ಮಂಡಳಿ ಮತ್ತು ಭಾರತೀಯ ತಾಂತ್ರಿಕ ಮತ್ತು ಆರ್ಥಿಕ ಸಹಕಾರ, ನವದೆಹಲಿಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಹಯೋಗದೊಂದಿಗೆ ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯಲ್ಲಿ ರೇಷ್ಮೆ ಮತ್ತು ರೇಷ್ಮೆ ಉದ್ಯಮಕ್ಕೆ ಸಂಬಂದಿಸಿದ ಅಂತರರಾಷ್ಟ್ರೀಯ ತರಬೇತಿ ನಡೆಯಿತು.
ಮೈಸೂರು ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ನಿರ್ದೇಶಕಿ ಡಾ.ಡಾ.ಪಿ.ದೀಪ ರೇಷ್ಮೆ ಕೃಷಿ ಅಭಿವೃದ್ಧಿಯಲ್ಲಿ ಸಂಸ್ಥೆಯ ಪ್ರಮುಖವಾದ ಪಾತ್ರದ ಬಗ್ಗೆ ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ರೇಷ್ಮೆ ಕೃಷಿಯ ತಾಂತ್ರಿಕ ಬೆಂಬಲವನ್ನು ಸಹ ಒದಗಿಸುತ್ತಿದೆ. ಸಂಸ್ಥೆಯ ಆವಿಷ್ಕಾರಗಳು ರೇಷ್ಮೆ ಕೃಷಿಯ ಉತ್ಪಾದಕತೆ, ಲಾಭದಾಯಕತೆ, ಸುಸ್ಥಿರತೆಯನ್ನು ಸುಧಾರಿಸಲು ಬಹಳ ಉಪಯುಕ್ತವಾಗಿವೆ ಎಂದರು.
ಈ ತರಬೇತಿಯು ಸೆ.30ರವರೆಗೆ ನಡೆಯುತ್ತದೆ. ಈ ತರಬೇತಿಯಲ್ಲಿ ತಾವು ರೇಷ್ಮೆ ಕೃಷಿಯ ತಾಂತ್ರಜ್ಞಾನಗಳನ್ನು ಕಲಿತು ತಮ್ಮ ದೇಶದಲ್ಲಿ ಉಪಯೋಗಿಸಿಬೇಕೆಂದರು. ತಮ್ಮ ಭಾಷಣದಲ್ಲಿ ಸಮಶೀತೊಷ್ಣದಲ್ಲಿ ರೇಷ್ಮೆ ಕೃಷಿ ಅಭಿವೃದ್ಧಿಯಲ್ಲಿ ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಮೈಸೂರು ಬಹಳ ಮುಖ್ಯವಾದ ಪಾತ್ರವನ್ನು ವಹಿಸಿದೆ. ಈ ಸಂಸ್ಥೆಯು ವಿವಿಧ ರೀತಿಯ ರೇಷ್ಮೆ ಕೃಷಿಗೆ ಸಂಬಂಧಿಸಿದ ತಾಂತ್ರಜ್ಞಾನಗಳನ್ನು ಮತ್ತು ಉತ್ಪನ್ನಗಳನ್ನು ಅವಿಷ್ಕಾರ ಮಾಡಿದೆ ಎಂದರು.
ಈ ತರಬೇತಿ ಕಾರ್ಯಕ್ರಮವನ್ನು ಬೆಂಗಳೂರು ಕೇಂದ್ರ ರೇಷ್ಮೆ ಮಂಡಳಿ ತಾಂತ್ರಿಕ ನಿರ್ದೇಶಕ ಡಾ.ಎಸ್. ಮಂಥಿರಾ ಮೂರ್ತಿ ತರಬೇತಿ ಉದ್ಘಾಟಿಸಿ ಶಿಬಿರದ ಉದ್ದೇಶಗಳು ಹಾಗೂ ರೇಷ್ಮೆ ಮತ್ತು ರೇಷ್ಮೆ ಉದ್ಯಮದ ಮಹತ್ವದ ಬಗ್ಗೆ ತರಬೇತಿ ಅಭ್ಯರ್ಥಿಗಳಿಗೆ ತಿಳುವಳಿಕೆ ನೀಡಿದರು. ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಮೈಸೂರು ರೇಷ್ಮೆ ಕೃಷಿಗೆ ಸಂಬಂಧಿಸಿದಂತೆ ಹಲವಾರು ತಾಂತ್ರಿಕತೆಗಳನ್ನು ಅವಿಷ್ಕಾರಿಸಿದೆ. ಈ ತರಬೇತಿ ಶಿಬಿರದಲ್ಲಿ ತಾಂತ್ರಿಕತೆಗಳನ್ನು ವಿಜ್ಞಾನಿಗಳು ತರಬೇತಿ ಅವಧಿಯಲ್ಲಿ ಪ್ರಯೋಗಿಕವಾಗಿ ವಿವರಿಸುತ್ತಾರೆ. ಅದನ್ನು ತಾವು ಅರಿತು ತಮ್ಮ ದೇಶಗಳಿಗೆ ಹೋದ ಮೇಲೆ ರೇಷ್ಮೆ ಕೃಷಿಯಲ್ಲಿ ಆಳವಡಿಸಿಕೊಳ್ಳಬೇಕು ಎಂದರು. 2014 ರಿಂದ ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಮೈಸೂರಿನಲ್ಲಿ 7ನೇ ತಂಡದ ಅಂತರರಾಷ್ಟ್ರೀಯ ಅಭ್ಯರ್ಥಿಗಳಿಗೆ ತರಬೇತಿ ಕಾರ್ಯಕ್ರಮವಾಗಿದೆ ಹಾಗು ಇಲ್ಲಿಯವರೆಗೆ 22 ದೇಶಗಳಿಂದ 132 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗಿದೆ. ಈ ತಂಡದಲ್ಲಿ 8 ದೇಶಗಳ 30 ಜನರಿಗೆ ತರಬೇತಿ ನೀಡಲಾಗುವುದೆಂದರು.
ಈ ಶಿಬಿರದಲ್ಲಿ, ಈಜಿಪ್ಟ್, ಇಥಿಯೋಪಿಯಾ, ಘಾನಾ, ಫಿಲಿಪೈನ್ಸ್, ಕ್ಯೂಬಾ, ಟಾಂಜಾನಿಯಾ, ಉಗಾಂಡಾ, ಥೈಲ್ಯಾಂಡ್ ದೇಶಗಳಿಂದ ಸುಮಾರು 30 ಅಭ್ಯರ್ಥಿಗಳು ಭಾಗವಹಿಸಿದ್ದರು. ಬೆಂಗಳೂರು ಐಎಸ್ಸಿ ಸಹಾಯಕ ಕಾರ್ಯದರ್ಶಿ ಪದ್ಮನಾವ ನಾಯಕ್, ವಿಜ್ಞಾನಿಗಳಾದ ಡಾ.ಎಲ್.ಕುಸುಮ, ಡಾ.ಎಂ.ಎಸ್.ರಂಜನಿ, ಸಿಎಸ್ಆರ್ ಟಿಐ ತರಬೇತಿ ವಿಭಾಗ ಮುಖ್ಯಸ್ಥ ಡಾ.ಕೆ.ಎನ್.ಮಧುಸೂದನ್ ಇನ್ನಿತರರು ಉಪಸ್ಥಿತರಿದ್ದರು.