ಪಬ್ಲಿಕ್ ಅಲರ್ಟ್
ಮೈಸೂರು: ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಬಳಗದ ವತಿಯಿಂದ ಅ.೨೬ರಂದು ಬಳಗದ ೭ನೇ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಸಾಧಕರಿಗೆ ಆದರ್ಶ ಗೃಹಿಣಿ ಪ್ರಶಸ್ತಿ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಅಧ್ಯಕ್ಷ ಡಾ.ಜಿ.ಎಂ.ವಾಮದೇವ ಹೇಳಿದರು.
ಜೆಎಸ್ಎಸ್ ಆಸ್ಪತ್ರೆ ಆವರಣದಲ್ಲಿರುವ ಡಾ.ಶಿವರಾತ್ರೀಶ್ವರ ರಾಜೇಂದ್ರ ಭವನದಲ್ಲಿ ಅಂದು ಸಂಜೆ ೬ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ಉದ್ಘಾಟಿಸುವರು. ಮೈವಿವಿ ಗಣಕ ವಿಜ್ಞಾನ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಡಿ.ಎಸ್.ಗುರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹಿರಿಯ ಸಾಹಿತಿ ಪ್ರೊ.ಶಶಿಕಲಾ ವಸದ ಅವರು ಶಿವರುದ್ರಮ್ಮ, ಶಿವಲಿಂಗಮ್ಮ, ಡಾ.ನಾಗಲಕ್ಷ್ಮಿ ಭಟ್ಟಾಚಾರ್ಯ ಅವರಿಗೆ ಆದರ್ಶ ಗೃಹಿಣಿ ಪ್ರಶಸ್ತಿಯನ್ನು ಪ್ರದಾನ ಮಾಡಿ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವರು. ಬಳಗದ ಗೌರವಾಧ್ಯಕ್ಷ ಡಾ.ಟಿ.ತಿಪ್ಪೇಸ್ವಾಮಿ ಉಪಸ್ಥಿತಿರಿರುವರು.ತಾವು ಅಧ್ಯಕ್ಷತೆ ವಹಿಸುವುದಾಗಿ ಹೇಳಿದರು.
ಸ್ದುದ್ದಿಗೋಷ್ಠಿಯಲ್ಲಿ ಬಳಗದ ಗೌರವಾಧ್ಯಕ್ಷ ಡಾ.ಟಿ.ತಿಪ್ಪೇಸ್ವಾಮಿ, ಕಾರ್ಯದರ್ಶಿ ಡಾ.ವಿಠಲರೆಡ್ಡಿ ಎ?.ಚುಳಕಿ, ಖಜಾಂಚಿ ಟಿ.ಮಹಾಂತೇಶ್, ಶಾರದಾ ಶಿವಲಿಂಗಸ್ವಾಮಿ ಇದ್ದರು.
ಅ.26ಕ್ಕೆ ಮಹಿಳಾ ಸಾಧಕರಿಗೆ ಸನ್ಮಾನ

Leave a Comment
Leave a Comment